ಮಧ್ಯಪ್ರದೇಶ : ಮಧ್ಯಪ್ರದೇಶದ ಸಾಗರ್ ಎಂಬಲ್ಲಿ ಮಸೀದಿಯೊಂದರ ಉತ್ಖನನದ ವೇಳೆ ಸೀತಾ ಮತ್ತು ರಾಮನ ವಿಗ್ರಹಗಳು ಕಂಡುಬಂದಿವೆ. ಇದೀಗ ಈ ಸುದ್ದಿ ಎಲ್ಲ ಕಡೆ ವೈರಲ್ ಆಗಿದ್ದು, ಸ್ಥಳಕ್ಕೆ ಹಿಂದೂ ಸಮುದಾಯದ ಮುಖಂಡರು ಹಾಗೂ ಜನರುನ ಕೂಡ ಆಗಮಿಸಿದ್ದರು. ಸಾಗರ್ನ ಪಪ್ಪೆಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂಸ್ಕೃತ ಬಚಾವೊ ಮಂಚ್ನ ನಾಯಕ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈ ಪ್ರದೇಶದಲ್ಲಿ ಒಂದು ಕಾಲದಲ್ಲಿ ದೇವಾಲಯವಿತ್ತು ಎಂಬುದು ಸಾಬೀತಾಗಿದೆ. ಈ ಸ್ಥಳದಲ್ಲಿ ಮತ್ತೆ ದೇವಾಲಯವನ್ನು ನಿರ್ಮಿಸಬೇಕು ಎಂಬುದು ಹಿಂದೂಗಳ ಬಯಕೆ ಇದೆ. ಇಲ್ಲಿ ಒಂದು ಕಾಲದಲ್ಲಿ ದೇವಾಲಯವಿತ್ತು. ನಂತರದಲ್ಲಿ ಅದನ್ನು ಮುಸ್ಲಿಂ ಸಮುದಾಯದವರು ಆಕ್ರಮಿಸಿಕೊಂಡಿದ್ದರು ಎಂದು ಹೇಳಿದ್ದಾರೆ. ಈ ವಿಚಾರ ತಿಳಿದು ನೂರಾರು ಹಿಂದೂಗಳು ಸ್ಥಳಕ್ಕೆ ಧಾವಿಸಿದ್ದರು. ಇದೇ ವೇಳೆ ಮುಸ್ಲಿಂ ಸಮುದಾಯದ ನಾಯಕರು ಕೂಡ ಸ್ಥಳಕ್ಕೆ ಬಂದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿತ್ತು. ಇನ್ನು ವಿಗ್ರಹಕ್ಕೆ ಹಿಂದೂ ನಾಯಕರು ಪೂಜೆ ನೆರವೇರಿಸಿದರು . ಪೂಜೆ ಮಾಡಲು ಅಲ್ಲೇ ಒಂದು ಸಣ್ಣ ವೇದಿಕೆಯನ್ನು ಕೂಡ ನಿರ್ಮಿಸಿದ್ದರು. ಆದರೆ ಮುಸ್ಲಿಮರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಈ ಘಟನೆ ಭಾರೀ ಗದ್ದಲಕ್ಕೆ ಕಾರಣವಾಗಿದೆ. ಇಲ್ಲಿರುವ ವೇದಿಕೆಯನ್ನು ತೆಗೆಯಬೇಕು ಎಂದು ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದು, ಹಿಂದೂ ನಾಯಕರು ಯಾವುದೇ ಕಾರಣಕ್ಕೂ ಈ ವೇದಿಕೆಯನ್ನು ತೆಗೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಮಧ್ಯಪ್ರವೇಶಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಗ್ರಾಮದಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಎರಡು ಸಮುದಾಯಗಳ ನಡುವೆ ಯಾವುದೇ ಘರ್ಷಣೆಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.