image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸ್ಮಾರ್ಟ್‌ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ಆರೋಪ : ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ದೂರಿಗೆ ಹೈ ಕೋರ್ಟ್ ತಡೆ

ಸ್ಮಾರ್ಟ್‌ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ಆರೋಪ : ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ದೂರಿಗೆ ಹೈ ಕೋರ್ಟ್ ತಡೆ

ಬೆಂಗಳೂರು: ಸ್ಮಾರ್ಟ್‌ ಮೀಟರ್ ಗುತ್ತಿಗೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧದ ಖಾಸಗಿ ದೂರಿನ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಖಾಸಗಿ ದೂರು ರದ್ದು ಕೋರಿ ಕೆ.ಜೆ.ಜಾರ್ಜ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ನಮ್ಮ ಕಕ್ಷಿದಾರರು ಜನಪ್ರತಿನಿಧಿಯಾಗಿದ್ದಾರೆ. ಅವರ ವಿರುದ್ಧದ ವಿಚಾರಣೆಗೆ ಭ್ರಷ್ಟಾಚಾರ ತಡೆ ಕಾಯಿದೆ ಸೆಕ್ಷನ್‌ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದರೆ, ಅರ್ಜಿದಾರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ವಿಚಾರಣೆಗೆ ಪರಿಗಣಿಸಲಾಗಿದೆ. ಇದು ಕಾನೂನುಬಾಹಿರ'' ಎಂದು ಪೀಠಕ್ಕೆ ವಿವರಿಸಿದರು.ಇದನ್ನು ಪರಿಗಣಿಸಿದ ಪೀಠ, ವಿಚಾರಣೆಗೆ ತಡೆ ನೀಡಿ ಆದೇಶಿಸಿತು.

Category
ಕರಾವಳಿ ತರಂಗಿಣಿ