ಮಂಗಳೂರು:ಅಕ್ಟೋಬರ್ 2 ರಂದು ನಡೆದ ಮೈಸೂರು ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕಲೆ ಸಂಸ್ಕೃತಿ ಸಂಪ್ರದಾಯಿಕ ಕ್ರೀಡೆ ಯನ್ನು ಪ್ರತಿಬಿಂಬಿಸುವ ಟ್ಯಾಬ್ಲೋ ಪ್ರದರ್ಶನ ಮಾಡಿದ್ದು ಜಿಲ್ಲೆಗೆ 2 ನೇ ಪ್ರಶಸ್ತಿ ಬಂದಿರುತ್ತದೆ.
ಯಕ್ಷಗಾನ, ಕಂಬಳ, ಹುಲಿವೇಷ ಮತ್ತಿತರ ಸಾಂಪ್ರದಾಯಿಕ ಮತ್ತು ಜಾನಪದ ಕ್ರೀಡೆಗಳ ವಿಷಯಗಳನ್ನು ಈ ಟ್ಯಾಬ್ಲೋದಲ್ಲಿ ಪ್ರದರ್ಶಿಸಲಾಗಿತ್ತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರವರ ಮಾರ್ಗದರ್ಶನದಲ್ಲಿ ಟ್ಯಾಬ್ಲೋ ನಿರ್ಮಿಸಲಾಗಿತ್ತು. ನೋಡಲ್ ಅಧಿಕಾರಿಯಾಗಿ ಗ್ರಾಮೀಣ ಕೈಗಾರಿಕೆ ಇಲಾಖೆ ಉಪ ನಿರ್ದೇಶಕರು ಮಂಜುನಾಥ್ ಹೆಗಡೆ ಕಾರ್ಯ ನಿರ್ವಹಿಸಿರುತ್ತಾರೆ.