ಬೆಳಗಾವಿ: ನ್ಯಾಷನಲ್ ಹೆರಾಲ್ಡ್ (ಯಂಗ್ ಇಂಡಿಯ) ಪ್ರಕರಣದಲ್ಲಿ ಯಾವುದೇ ಎಫ್.ಐ.ಆರ್., ಪ್ರಕರಣಗಳು ಇಲ್ಲದೇ ದುರುದ್ದೇಶಪೂರಕವಾಗಿ ಇಡಿ ಸಂಸ್ಥೆಯನ್ನು ಬಳಸಿಕೊಂಡು ಕೇಂದ್ರದ ಬಿಜೆಪಿ ನಾಯಕರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವ್ಯಕ್ತಿತ್ವ ತೇಜೋವಧೆ ಮಾಡುತ್ತಿರುವ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಳಗಾವಿಯ ಸುವರ್ಣ ಸೌಧದ ಗಾಂಧಿ ಪ್ರತಿಮೆಯ ಮುಂದೆ ನಿನ್ನೆ ಬೃಹತ್ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರೊಂದಿಗೆ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಅವರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.