ಬೆಂಗಳೂರು : ಕಾನ್ಫಿಡೆಂಟ್ ಗ್ರೂಫ್ ಸಂಸ್ಥೆಯ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆದಾಯಕ್ಕೂ ಮೀರಿದ ಗಳಿಕೆ ಕಾರಣಕ್ಕೆ ಸಿಜೆ ರಾಯ್ ಅವರ ಮೇಲೆ ಇತ್ತೀಚೆಗೆ ಬಹಳಷ್ಟು ಬಾರಿ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿತ್ತು. ಇಂದು ಕೂಡ ಅವರ ಆದಾಯದ ಲೆಕ್ಕಾಚಾರದಲ್ಲಿ ಐಟಿ ಇಲಾಖೆ ತಪಾಸಣೆ ನಡೆಸುತ್ತಿದ್ದಾಗ ಅವರು ಐಟಿ ದಾಳಿಗೆ ಹೆದರಿ ಸಾವಿಗೆ ಶರಣಾಗಿದ್ದಾರೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ.
ಕನ್ನಡ ಬಿಗ್ ಬಾಸ್ ಶೋಗೆ ರೂ. 50 ಲಕ್ಷ ಕೊಟ್ಟು ಸುದ್ದಿಯಾಗಿದ್ದ ಅವರು ಕಾನ್ಫಿಡೆಂಟ್ ಗ್ರೂಫ್ ಸಂಸ್ಥೆಯನ್ನು ಮುನ್ನಡೆಸುವ ಜೊತೆಗೆ ಬಹಳಷ್ಟು ಸಾಮಾಜಿಕ ಕೆಲಸ ಹಾಗೂ ಸಿನಿಮಾ-ಮನರಂಜನಾ ಕ್ಷೇತ್ರಕ್ಕೆ ಕೊಡುಗೆ ಕೂಡ ನೀಡಿದ್ದಾರೆ.