image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅಭಿನಂದನೆ ಸಲ್ಲಿಸಿದ ಲೆಕ್ಕಪರಿಶೋಧಕರಾದ ಸಿಎ ನರೇಂದ್ರ ಪೈ ತಂಡ

ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅಭಿನಂದನೆ ಸಲ್ಲಿಸಿದ ಲೆಕ್ಕಪರಿಶೋಧಕರಾದ ಸಿಎ ನರೇಂದ್ರ ಪೈ ತಂಡ

ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್ ಪ್ರಾಯೋಜಿತ ನವೋದಯ ಸ್ವಸಹಾಯ ಸಂಘಗಳ ರಜತ ಸಂಭ್ರಮವನ್ನು ಯಶಸ್ವಿಯಾಗಿ ಸಂಘಟಿಸಿದ ಸಹಕಾರ ರತ್ನ ಡಾ. ಎಂ. ಎನ್‌. ರಾಜೇಂದ್ರ ಕುಮಾ‌ರ್ ಅವರನ್ನು ಮಂಗಳೂರಿನ ಲೆಕ್ಕಪರಿಶೋಧಕರಾದ ಸಿಎ ನರೇಂದ್ರ ಪೈ ಪಿ, ಅವರು ತಮ್ಮ ಬಳಗದೊಂದಿಗೆ ಸೋಮವಾರ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಅಭಿನಂದಿಸಿದರು. ಸಹಕಾರ ಕ್ಷೇತ್ರದಲ್ಲಿ ಅಗ್ರಮಾನ್ಯ ನಾಯಕರಾಗಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ. ಎಂ. ಎನ್‌. ರಾಜೇಂದ್ರ ಕುಮಾ‌ರ್ ಅವರು ನವೋದಯ ಸ್ವಸಹಾಯ ಸಂಘಗಳಿಗೆ ಭದ್ರ ನೆಲೆಯನ್ನು ತಂದುಕೊಟ್ಟವರು. ಅದರಲ್ಲೂ ಮಹಿಳಾ ಸಬಲೀಕರಣಕ್ಕೆ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಅವರ ಈ ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬ್ಯಾಂಕ್‌ನ ನಿರ್ದೇಶಕರುಗಳಾದ ಐಕಳ ಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಶಶಿಕುಮಾ‌ರ್ ಬಾಲ್ಯೂಟ್ಟು, ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್, ಬಜಪೆ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಶೆಟ್ಟಿ, ಉದ್ಯಮಿ ಜಯಪ್ರಕಾಶ್ ತುಂಬೆ, ಸಿಎ ನರಸಿಂಹ ಕಾಮತ್, ಶಿರಾಲ್ ಎಸ್. ರೈ ಮೊದಲಾದವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ