ಮಂಗಳೂರು: ಕಡಬ ಪಟ್ಟಣ ಪಂಚಾಯತ್ನಲ್ಲಿ ಆಗಸ್ಟ್ 17 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಅವಶ್ಯವೆಂದು ಕಂಡುಬರುವ ಜಿಲ್ಲೆಯ ಎಲ್ಲಾ ಪರವಾನಿಗೆದಾರರು (ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅವರ ಪರವಾನಿಗೆಯಲ್ಲಿ ಹೊಂದಿರುವ ಆಯುಧಗಳನ್ನು ಠೇವಣಿ ಇರಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.