image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಲ್ಕೂರ ಪ್ರತಿಷ್ಠಾನ ವತಿಯಿಂದ ಶ್ರೀಕ್ಷೇತ್ರ ಕದ್ರಿಯಲ್ಲಿ ಅದ್ದೂರಿ ಶ್ರೀಕೃಷ್ಣ ವೇಷ ಸ್ಪರ್ಧೆ

ಕಲ್ಕೂರ ಪ್ರತಿಷ್ಠಾನ ವತಿಯಿಂದ ಶ್ರೀಕ್ಷೇತ್ರ ಕದ್ರಿಯಲ್ಲಿ ಅದ್ದೂರಿ ಶ್ರೀಕೃಷ್ಣ ವೇಷ ಸ್ಪರ್ಧೆ

ಮಂಗಳೂರು : ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ, ಪ್ರತಿಭೆ ಗುರುತಿಸಿ ಬೆಳೆಸುವ ಸದುದ್ದೇಶದಿಂದ ಕಳೆದ 43 ವರ್ಷಗಳಿಂದ ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ 'ಶ್ರೀ ಕೃಷ್ಣ ವೇಷ ಸ್ಪರ್ಧೆ'ಯನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸಪ್ಟೆಂಬ‌ರ್ 14ರಂದು ಭಾನುವಾರ ಕೃಷ್ಣಾಷ್ಟಮಿಯಂದು ಏರ್ಪಡಿಸಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ ಕಲ್ಕೂರ ತಿಳಿಸಿದರು.  ನಗರದ ಖಾಸಗಿ    ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  14ನೇ ತಾರೀಖು  ಬೆಳಿಗ್ಗೆ 9.00ರಿಂದ ಶ್ರೀ ಕೃಷ್ಣ ವರ್ಣ ವೈಭವ, ಮಧ್ಯಾಹ್ನ 12 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, 1 ಗಂಟೆಗೆ ಸರಿಯಾಗಿ ಶ್ರೀಕೃಷ್ಣ ಜನ್ಮ ಮಹೋತ್ಸನ ನಂದಗೋಕುಲ ವೇದಿಕೆಯಲ್ಲಿ ಗಣ್ಯಾತಿಗಣ್ಯರು ಮತ್ತು ಪುಟಾಣಿಕೃಷ್ಣರು ಮತ್ತು ಮಾತೆಯರ ಸಮ್ಮುಖದಲ್ಲಿ ದೀಪ ಪ್ರಜ್ವಲನದೊಂದಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಉದ್ಘಾಟನೆಗೊಳ್ಳಲಿದೆ. ರಾತ್ರಿ 12.00ರ ತನಕ ವಿವಿಧ ಸ್ಪರ್ಧೆಗಳನ್ನು ಒಟ್ಟು 43 ವಿಭಾಗಗಳಲ್ಲಿ, 9 ವೇದಿಕೆಗಳಲ್ಲಿ ಏಕ ಕಾಲದಲ್ಲಿ ಆಯೋಜಿಸಲಾಗಿದೆ ಮತ್ತು ಮಧ್ಯಾಹ್ನ 12 ರಿಂದ ರಾತ್ರಿ 12ರವರೆಗೆ ವಿವಿಧ ಸಾಹಿತ್ಯಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ಜೋಡಿಸಲಾಗಿದೆ. 

ರಾಷ್ಟ್ರವ್ಯಾಪಿ ಮಾನ್ಯತೆಗೊಂಡ ಶ್ರೀ ಕೃಷ್ಣವೇಷ ಸ್ಪರ್ಧೆಗಳು ಒಟ್ಟು 43 ವಿಭಾಗಗಳಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಅಭಿಷೇಕ ಮಂದಿರ, ಕದ್ರಿಕೆರೆ, ಅಶ್ವತಕಟ್ಟೆ ಬಳಿ ವೇದಿಕೆ, ಅಭಿಷೇಕ ಮಂದಿರ 1ನೇ ಮಹಡಿ, ಕಲ್ಯಾಣ ಮಂಟಪ, ಮಂಜುಶ್ರೀ ಸಹಿತ ಏಕಕಾಲದಲ್ಲಿ ನಡೆಯಲಿದೆ. ಕದ್ರಿ ದೇವಳದ ಒಟ್ಟು ಆವರಣದಲ್ಲಿ ಶ್ರೀ ಕೃಷ್ಣ ಜನ್ಮ ಮಹೋತ್ಸವ ಸಮಿತಿ ಅಭಿಷೇಕ ಮಂದಿರ ಪ್ರಧಾನ ವೇದಿಕೆ ಸಹಿತ ಏಕಕಾಲದಲ್ಲಿ ನಡೆಯಲಿದೆ ಎಂದು ವಿವರಿಸಿದರು.

ಸ್ಪರ್ಧಾಳುಗಳೆಲ್ಲರಿಗೂ ಉಡುಪಿ ಕಡಗೋಲು ಕೃಷ್ಣನ ಪಂಚಲೋಹದ ವಿಗ್ರಹ, ಶ್ರೀಕೃಷ್ಣ ಚರಿತ್ರೆ ಪುಸ್ತಕ, ಕದ್ರಿ ಶ್ರೀ ಮಂಜುನಾಥ ದೇವರ ಭಾವಚಿತ್ರ, ಪ್ರೋತ್ಸಾಹಕರಿಂದ ನೀಡಲ್ಪಟ್ಟ ಇತರ ಉಡುಗೊರೆಗಳು ಹಾಗೂ ಪ್ರಶಂಸನಾ ಪತ್ರ ಮತ್ತು ಶ್ರೀಮದ್‌ ಭಗವದ್ಗೀತೆಯ ಪ್ರತಿಯನ್ನು ಆಕರ್ಷಕ ಬಟ್ಟೆ ಚೀಲದೊಂದಿಗೆ ನೀಡಲಾಗುವುದು, ಜೊತೆಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಹಾಗೂ ಇನ್ನಿತರ ಬಹುಮಾನಗಳನ್ನು ನೀಡಲಾಗುವುದು ಎಂದರು. 

ಸ್ಪರ್ಧಾ ಸ್ಥಳದಲ್ಲೇ ಹೆಸರು ನೋಂದಾಯಿಸಲು ಅವಕಾಶವಿದೆ. ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ಹೆಚ್ಚಿನ ವಿವರಗಳಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ, ಮಹಾತ್ಮಗಾಂಧಿ ರಸ್ತೆ, ಕೊಡಿಯಲ್ ಬೈಲ್ ಮಂಗಳೂರು. ದೂ.

0824-2492239, 9448125949,

98450283736, email-

kalkuraadvt@gmail.com

pradeep.kalkura@gmail.com,  ಇವರನ್ನು ಸಂಪರ್ಕಿಸಬಹುದು ಎಂದರು.

Category
ಕರಾವಳಿ ತರಂಗಿಣಿ