ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಂದು ಅಕ್ಟೋಬರ್ 3ರವರೆಗೆ ಮಂಗಳೂರು ದಸರಾ ಮಹೋತ್ಸವ ಜರುಗಲಿದೆ.ಸೆ.22ರಂದು ಬೆಳಗ್ಗೆ 8.30ಕ್ಕೆ ಗುರು ಪ್ರಾರ್ಥನೆಯೊಂದಿಗೆ ಪುಣ್ಯಾಹ ಹೋಮ ನವಕಲಶಾಭಿಷೇಕ ನಡೆದು ಪೂರ್ವಾಹ್ನ 12ಗಂಟೆಗೆ ನವದುರ್ಗೆಯರು, ಮಹಾಗಣಪತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಪ್ರಾರಂಭಗೊಂಡು ಅಕ್ಟೋಬರ್ 3ರ ತನಕ ಕೇಂದ್ರದ ಮಾಜಿ ಸಚಿವರು, ಕ್ಷೇತ್ರದ ಅಭಿವೃದ್ಧಿಯ ರುವಾರಿ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ದಸರಾ (ನವರಾತ್ರಿ ಮಹೋತ್ಸವ) ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಜೃಂಬನೆಯಿಂದ ಜರುಗಲಿದೆ ಎಂದು ಎಂದು ಶ್ರೀ ಕ್ಷೇತ್ರದ ಕೋಶಾಧಿಕಾರಿಯಾದ ಪದ್ಮರಾಜ್ ಆರ್ ತಿಳಿಸಿದರು. ಗೋಕರ್ನಾಥೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,
ವೈದಿಕ ಪರಂಪರೆ, ಧಾರ್ಮಿಕ ಶ್ರದ್ಧೆ, ಸಂಸ್ಕೃತಿಯ ಸಂಭ್ರಮ, ಸಂಗೀತದ ಸಪ್ತಸ್ವರ, ಕಲೆ, ಸಾಹಿತ್ಯ, ಕ್ರೀಡೆಸಾಧನೆಗಳ ಏಕತೆಯ ಸಮನ್ವಯ ನವದುರ್ಗೆಯ ಆರಾಧನೆಯ ಭವ್ಯ ದಸರಾ ಈ ಬಾರಿಯ ವಿಶೇಷತೆ. ಸೆ.22ರಂದು ಬೆಳಗ್ಗೆ 11.30ಕ್ಕೆ ಧಾರ್ಮಿಕ ಕಾರ್ಯಕ್ರಮಗಳು ಮಂಗಳೂರು ರಾಮಕೃಷ್ಣ ಮಿಶನ್ ನ ಅಧ್ಯಕ್ಷರಾದ ಜಿತಕಾಮಾನಂದಜಿ ಮಹಾರಾಜ್, ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಜೀ ಅವರ ದಿವ್ಯಹಸ್ತದಿಂದ ಶ್ರೀ ವಿ.ಜನಾರ್ದನ ಪೂಜಾರಿಯವರ ಸಮ್ಮುಖದಲ್ಲಿ ಚಾಲನೆಗೊಳ್ಳಲಿದ್ದು,ದೇವಸ್ಥಾನದ ಒಳಾಂಗಣದ ಮೇಲ್ದಾವಣಿ ಜಿಲ್ಲೆಯಲ್ಲಿಯೇ ಪ್ರಥಮ ಎಂಬಂತೆ ಹೊಸಮಾದರಿಯಲ್ಲಿ ನವೀಕರಣಗೊಂಡಿದ್ದು, ಸೆ.21ರಂದು ಸಂಜೆ ಕೇತ್ರದ ನವ ನಿರ್ಮಾಣದ ರೂವಾರಿ. ಕೇಂದ್ರದ ಮಾಜಿ ಸಚಿವರು ಮಾನ್ಯ ಜನಾರ್ದನ ಪೂಜಾರಿಯವರು ಉದ್ಘಾಟಿಸಲಿದ್ದಾರೆ.
ಸೆ.22ರಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಎನ್ಎಂಪಿಎ ಚೇರ್ಮನ್ ಡಾ.ವೆಂಕಟರಮಣ್ ಅಕ್ಕಚ್ಚುರಾಜು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್ ಉದ್ಘಾಟಿಸಲಿದ್ದಾರೆ. ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾನಿಧ್ಯ ವಿಶೇಷ ಶಾಲೆ ಮಂಗಳೂರು, ವೈಟ್ಡೌಸ್ ಮಂಗಳೂರು, ಎಂ ಫ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್ನ ಸೇವೆಯನ್ನು ಗುರುತಿಸಿ ಈ ಸಂದರ್ಭ ಪುರಸ್ಕರಿಸಲಾಗುವುದು. ಭರತನಾಟ್ಯದಲ್ಲಿ ಗೊಲ್ಡನ್ ಬುಕ್ ಆಫ್ ವರ್ಲ್ಡ್. ರೆಕಾರ್ಡ್ ಸಾದನೆಗೈದ ರೆಮೋನಾ, ದೀಕ್ಷಾ ಸುವರ್ಣ ಅವರನ್ನು ಗೌರವಿಸಲಾಗುವುದು ಎಂದರು.
ಸೆ.25ರಂದು ಸಂಜೆ 6ಗಂಟೆಗೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಲೋಕಸಭೆ ಸದಸ್ಯ ಬ್ರಿಜೇಶ್ ಚೌಟ, ಎಐಸಿಸಿಯ ಕೆ.ಸಿ.ವೇಣುಗೋಪಾಲ್, ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಹಾಗೂ ಜನಪ್ರತಿನಿಧಿಗಳು, ಗಣ್ಯರ ಉಪಸ್ಥಿತಿಯಲ್ಲಿ ಮಾನ್ಯ ಜನಾರ್ದನ ಪೂಜಾರಿಯವರ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ.ಸೆ.28ರಂದು ಬೆಳಗ್ಗೆ 9ಕ್ಕೆ ವಿಶ್ವ ಬಿಲ್ಲವ ಮಹಿಳಾ ಸಂಘದ ನೇತೃತ್ವದಲ್ಲಿ ಸಾಮೂಹಿಕ ಚಂಡಿಕಾ ಹೋಮ ನೆರವೇರಲಿದೆ ಎಂದರು.
ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ತಂಡಗಳನ್ನು ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಮಂಗಳೂರು ದಸರಾದ ಸಾಂಸ್ಕೃತಿಕ ವೇದಿಕೆಯಲ್ಲಿ ಕಲಾಪ್ರದರ್ಶನ ನೀಡಲಿದ್ದಾರೆ. 40 ತಂಡಗಳ ಸುಮಾರು 500ಕ್ಕೂ ಅಧಿಕ ಕಲಾವಿದರಿಗೆ ಕಲಾಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೇರೆ ಬೇರೆ ಕಲಾಸಕ್ತ ಮನಸ್ಸುಗಳಿಗಾಗಿ ಭರತನಾಟ್ಯ, ಜಾನಪದ ಸಂಭ್ರಮ, ಭಕ್ತಿ ಪ್ರಧಾನ ಚೈತ್ಯ ರೂಪಕ, ಯಕ್ಷಗಾನ ಗಾನ ನಾಟ್ಟು ವೈಭವ, ತಾಳಮದ್ದಳೆ, ಹರಿಕಥೆ, ಸಂಗೀತ ಪರಿಕರಗಳ ಜುಗಲ್ಬಂಧಿ, ಸಪ್ತ ವೀಣಾವಾದನ ಹಾದೂ ಪ್ರದರ್ಶನ ನವರಸಗಳ ಸಮ್ಮಿಲನ ಈ ಬಾರಿಯ ವಿಶೇಷತೆ.
ಸೆ.23ರಂದು ಸಂಜೆ 4ರಿಂದ ಅರವರೆಗೆ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಸಹಯೋಗದದಲ್ಲಿ ಬಹುಭಾಷಾ ಕವಿಗೋಷ್ಠಿ ಆಯೋಜಿಸಲಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೆ.24ರಂದು ಮಕ್ಕಳಿಗಾಗಿ ಮೂರು ವಿಭಾಗದಲ್ಲಿ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆ ಬೆಳಗ್ಗೆ 9ರಿಂದ ಸಂಜೆಯವರೆಗೆ ನಡೆಯಲಿದೆ.
ದೇಹದಾಡ್ಯ ಸ್ಪರ್ಧೆ
26ರಂದು ಯುವಕರಿಗೂ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಮಿಸ್ಟರ್ ಮಂಗಳೂರು ದಸರಾ ಕ್ಲಾಸಿಕ್ 'ರಾಜ್ಯ ಮಟ್ಟದ ದೇಹಧ್ಯಾತ್ಮ ಸ್ಪರ್ಧೆ ಆಯೋಜಿಸಲಾಗಿದೆ.
ಮಕ್ಕಳ ದಸರಾ
ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟನಲ್ಲಿ ಸೆ.28ರಂದು 'ಮಕ್ಕಳ ದಸರಾ' ಪರಿಕಲ್ಪನೆಯಡಿ ಮಕ್ಕಳಿಗೋಸ್ಕರ ಕಿನ್ನಿಪಿಲಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಸಂಗೀತ ಸ್ಪರ್ಧೆಯನ್ನು ಆಕರ್ಷಕ ಬಹುಮಾನದೊಂದಿಗೆ ಆಯೋಜಿಸಲಾಗಿದೆ. ಮಕ್ಕಳ ದಸರಾವನ್ನು ಭಾರತೀಯ ಬುದ್ಧಿವಂತ ಮಗು ಎಂದೇ ಪ್ರಖ್ಯಾತಿ ಪಡೆದ ಅಗ್ನಿವು ಕ್ಷೇತ್ರದ ಮುಖ್ಯ ದ್ವಾರದ ಬಳಿ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಿ ಬಳಿಕ ವೈಭವದ ಮಕ್ಕಳ ಮೆರವಣಿಗೆಯೊಂದಿಗೆ ಸ್ಪರ್ಧೆಗಳು ಆರಂಭವಾಗಲಿದೆ.
ಅಸಾಮಾನ್ಯ ಸ್ತ್ರಿ ಪುರಸ್ಕಾರ ಪ್ರದಾನ
ಈ ಪುರಸ್ಕಾರ ನಮ್ಮ ಕ್ಷೇತ್ರದ ಗೌರವಕ್ಕೆ ಬಹುದೊಡ್ಡ ಗರಿಮೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರ ವರೆಗೆ ನಡೆಯುವ ದಸರಾದಲ್ಲಿ ನವಶಕ್ತಿಗಳ ಆಶೀರ್ವಾದದೊಂದಿಗೆ ಪ್ರತಿದಿನ ಒಬ್ಬರಿಗೆ ಸಂಜೆ 7.30ಕ್ಕೆ 9 ಸಾಧಕಿಯರಿಗೆ ಅಸಾಮಾನ್ಯ ಸ್ತ್ರಿ ಪುರಸ್ಕಾರ -2025ರನ್ನು ನೀಡಿ ಗೌರವಿಸಲಾಗುವುದು ವನವಾ ಪೂಜಾರಿ (ಸಾಮಾಜಿಕ-ಮೋಕ್ಷಧಾನು), ವೆಂಕಮ್ಮ ಕುಡಂಬೆಟ್ಟು (ಪ್ರಸೂತಿ ತಜ್ಞೆ), ಶಾಲೆಟ್ (ಸಾಮಾಜಿಕ- ಮೂಕಪ್ರಾಣಿಗಳ ಆರೈಕೆ), ಸುಶೀಲಾ ಪಾಣಾರ (ಪಾರ್ದನ), ಯೋಗಾಕ್ಷಿ ಗಣೇಶ್ (ತೆಂಕುತಿಟ್ಟು ಮಹಿಳಾ ಯಕ್ಷಗಾನ ಮೇಳದ ಸಂಚಾಲಕಿ), ಜಾನಕಿ ಕೊಡ್ಯಡ್ಕ (ನಾಟಿ ವೈದ್ಯ) ತಬಸ್ಸುಮ್ (ಸಾಮಾಜಿಕ-ಅನಾಥ ಎಚ್.ಐ.ವಿ ಪೀಡಿತ ಮಕ್ಕಳ ಆರೈಕೆ), ಬಿ.ಎಂ.ರೋಹಿಣಿ ಕನ್ನಡ ಮತ್ತು ತುಳು ಸಾಹಿತ್ಯ ಕ್ಷೇತ್ರ), ರೋಹಿಣಿ ಜಗರಾಮ್ (ತುಳು ರಂಗಭೂಮಿ ಮತ್ತು ಚಲನಚಿತ್ರ ರಂಗ) ಇವರ ಅಪ್ರತಿಮ ಸಾಧನೆ ಗುರುತಿಸಿ ಅಸಾಮಾನ್ಯ ಶ್ರೀ ಪುರಸ್ಕಾರ ಪ್ರದಾನ ನೆರವೇರಲಿದೆ.
ಧಾರ್ಮಿಕ ಅನುಷ್ಠಾನಗಳು
ನವರಾತ್ರಿ ಪ್ರಯುಕ್ತ ಪ್ರತಿದಿನವೂ ಬೆಳಗ್ಗೆಯಿಂದ ರಾತ್ರಿವರೆಗೂ ವಿವಿಧ ಧಾರ್ಮಿಕ ಅನುಷ್ಠಾನ ಭಜನಾ ಕಾರ್ಯಕ್ರಮಗಳು ನೆರವೇರಲಿದೆ. ಸೆ.22ರಂದು ಮಹಾನವಮಿ, 23ರಂದು ದುರ್ಗಾ ಹೋಮ, 24ರಂದು ಪಂಚದುರ್ಗಾ ಹೋಮ, 25ರಂದು ಆರ್ಯದುರ್ಗಾ ಹೋಮ, 26ರಂದು ಅಂಬಿಕಾದುರ್ಗಾ ಹೋಮ, 27 ಭಗವತಿ ದುರ್ಗಾ ಹೋಮಾ, 28 ರಂದು ಸಾಮೂಹಿಕ ಚಂಡಿಕಾ ಹೋಮ, 29 ರಂದು ಮಹಿಷಮರ್ದಿನಿ ದುರ್ಗಾ ಹೋಮ, 30ರಂದು ಚಂಡಿಕಾ ಹೋಮ, ಹಗಲೋತ್ಸವ, ಅ 1ರಂದು ಸರಸ್ವತಿ ಹೋಮ, ಶತ ಸೀಯಾಳಭಿಷೇಕ, ಶಿವಪೂಜೆ (ಮಹಾನವಮಿ), ಆ2ರಂದು ವಾಗೀಶ್ವರಿ ದುರ್ಗಾ. ಶಿವಪೂಜೆ. 3ರಂದು ಪ್ರಾತಃಕಾಲ ಗಂಟೆ 4ರಿಂದ ಪೂಜೆ ಬಲಿ, ಮಂಟಪ ಬಲಿ, ಪ್ರಾತಃಕಾಲ ಮಂಟಪ ಪೂಜೆ ಬಳಿಕ ಶ್ರೀ ಶಾರದಾ ವಿಸರ್ಜನೆ, ಅವಧೃತಸ್ನಾನ. ರಾತ್ರಿ 9ರಿಂದ ಗುರುಪೂಜೆ ನೆರವೇರಲಿದೆ.
2ರಂದು ಭವ್ಯ ಶೋಭಾಯಾತ್ರೆ
ಅಕ್ಟೋಬರ್ 2ರಂದು ಶ್ರೀ ಬಿ.ಜನಾರ್ದನ ಪೂಜಾರಿಯವರ ನೇತೃತ್ವದದಲ್ಲಿ ಸಂಜೆ 4ರಿಂದ ನವದುರ್ಗೆಯರು, ಗಣಪತಿ ಮತ್ತು ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯು ಕ್ಷೇತ್ರದಿಂದ ಹೊರಟು ಕಂಬ್ಳರಸ್ತೆ, ಮಣ್ಣಗುಡ್ಡೆ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತ, ಲಾಲ್ ಬಾಗ್, ಬಲ್ಲಾಳ್ ಭಾಗ್, ಪಿವಿಎಸ್ ಸರ್ಕಲ್, ನವಭಾರತ ಸರ್ಕಲ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನ ಮುಂಭಾಗದಿಂದ ಕಾರ್ ಸ್ಟ್ರೀಟ್, ಚಿತ್ರಾ ಬಾರ್ಕಿಸ್ ಅಳಕೆಯಾಗಿ ಮತ್ತೆ ಶ್ರೀಕ್ಷೇತ್ರಕ್ಕೆ ಬರಲಿದ್ದು, ನಂತರ ವಿಸರ್ಜನೆಗೊಳ್ಳಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅದ್ಯಕ್ಷರಾದ ಜೈರಾಜ್ ಸೋಮರಾಜ್, ಉಪಾದ್ಯಕ್ಷರಾದ ಉರ್ಮಿಳಾ ರಮಣ, ಜಗದೀಪ್ ಸುವರ್ಣ, ಕೃತಿನ್ ಅಮಿನ್,ದೇವೇಂದ್ರ ಪೂಜಾರಿ, ಬಿ ಜಿ ಸುವರ್ಣ, ಶೈಲೇಂದ್ರ ಸುವರ್ಣ, ಹರೀಶ್ ಸುವರ್ಣ, ಲತೇಶ್ ಕೋಟ್ಯಾನ್, ರಾದಕೃಷ್ಣ, ಹರಿಕೃಷ್ಣ ಬಂಟ್ವಾಳ ಉಪಸ್ಥಿತರಿದ್ದರು.