image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಿಥುನ್ ರೈ- ಐವಾನ್ ಡಿಸೋಜಾಗೆ ನೋಟಿಸ್‌ ನೀಡಿದ ಕಾಂಗ್ರೆಸ್ ಹೈಕಮಾಂಡ್ !

ಮಿಥುನ್ ರೈ- ಐವಾನ್ ಡಿಸೋಜಾಗೆ ನೋಟಿಸ್‌ ನೀಡಿದ ಕಾಂಗ್ರೆಸ್ ಹೈಕಮಾಂಡ್ !

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ  ಘೋಷಣೆ ಕೂಗಿದ್ದವರಿಗೆ ಐಐಸಿಸಿ ಶಾಕ್ ನೀಡಿದೆ. ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ನಡುವಿನ ಸಂವಾದದ ಶತಮಾನೋತ್ಸವ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆ.ಸಿ.ವೇಣುಗೋಪಾಲ್  ಮಂಗಳೂರಿಗೆ ಆಗಮಿಸಿದ್ದರು.

ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಆಚೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹಾಗೂ ಅವರ ಬೆಂಬಲಿಗರು ಡಿಕೆಶಿ ಪರ ಡಿಕೆ ಡಿಕೆ ಎಂದು ಘೋಷಣೆ ಕೂಗಿದ್ದಲ್ಲದೇ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿದ್ದರು.ಹೀಗಾಗಿ ಕಾರಣ ಕೇಳಿ ಮಿಥುನ್ ರೈಗೆ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್ ಶೋಕಾಸ್ ನೋಟಿಸ್‌ ಜಾರಿ ಮಾಡಿದ್ದಾರೆ.  ಸೂಕ್ತ ಕಾರಣ ನೀಡುವಂತೆ ಕಾಂಗ್ರೆಸ್ ನೋಟಿಸ್ ನೀಡಿದೆ. ಇತ್ತ ಸಿ ಎಂ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಘೋಷಣೆ ಕೂಗಿದ್ದ ಪರಿಷತ್‌ ಸದಸ್ಯ ಐವಾನ್ ಡಿಸೋಜಾಗೂ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡಿದೆ. 

Category
ಕರಾವಳಿ ತರಂಗಿಣಿ